Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆಶಿ​ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು ಗೊತ್ತಾ?

0

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದರು. ಆದರೆ ಅಂತಿಮವಾಗಿ ಸಿದ್ದರಾಮಯ್ಯ ಅವರು ಸಿಎಂ, ಡಿ.ಕೆ.ಶಿವಕುಮಾರ್‌ ಅವರು ಡಿಸಿಎಂ ಆಗಿ ಎಐಸಿಸಿ ಘೋಷಣೆ ಮಾಡಿದೆ. ಇದಕ್ಕೂ ಮುನ್ನ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿ ಸಿಎಂ ಸ್ಥಾನದ ಪಟ್ಟು ಕೈಬಿಡುವಂತೆ ಕೇಳಿಕೊಂಡು ಕೆಲ ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ, ‘ನಿಮ್ಮ ಬೇಡಿಕೆ ಸರಿಯಾಗಿದೆ. ಸದ್ಯಕ್ಕೆ ಪಕ್ಷದ ಹಿತದೃಷ್ಟಿಯಿಂದ ಎರಡು ವರ್ಷ ಸಿದ್ದರಾಯಮ್ಮ ಅವರಿಗೆ ಅವಕಾಶ ಬಿಟ್ಟುಕೊಡಿ. ಎರಡು ವರ್ಷ ಆದ ಬಳಿಕ ನಾವೇ ಅಧಿಕಾರ ಹಸ್ತಾಂತರ ಮಾಡಿಸುತ್ತೇವೆ. ಈಗ ಡಿಸಿಎಂ ಆಗಿ, ಬೇಕಿದ್ದರೆ ನೀವೊಬ್ಬರೇ ಡಿಸಿಎಂ ಆಗಿ. ಅಷ್ಟೇ ಅಲ್ಲದೆ ನೀವು ಯಾವ ಖಾತೆಯನ್ನು ಕೇಳುತ್ತೀರೋ ಅದನ್ನೇ ಕೊಡುತ್ತೇವೆ. ಒಂದು ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸಂಪುಟದಲ್ಲಿ ಒಟ್ಟಾಗಿ ಕೆಲಸ ಮಾಡಲು ಇಷ್ಟವಿಲ್ಲ ಎಂದಾದರೆ, ನೀವು ಪಕ್ಷದ ಜವಾಬ್ದಾರಿಯಲ್ಲಿ ಮುಂದುವರಿಯಿರಿ ಎಂದು ಆಫರ್ ಕೊಟಿದ್ದರು ಎನ್ನಲಾಗಿದೆ. ಪಕ್ಷಕ್ಕಾಗಿ ನಿಮ್ಮ ಪ್ರಯತ್ನದ ಬಗ್ಗೆ ನಮಗೆ ಸಂಪೂರ್ಣ ಅರಿವು ಇದೆ. ಈಗಲೇ ಸಿಎಂ ಬೇಕು ಅಂತ ಹಠ ಹಿಡಿಯಬೇಡಿ. ಬೇರೆ ರಾಜ್ಯದಲ್ಲಾದಂತೆ ಕರ್ನಾಟಕದಲ್ಲಿ ಆಗಲು ನಾವು ಬಿಡುವುದಿಲ್ಲ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್‌ ಅವರಿಗೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್‌ ಅವರು ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅಲ್ಲದೆ, ಎರಡು ಪ್ರಮುಖ ಖಾತೆಗಳಾದ ಇಂಧನ ಮತ್ತು ನೀರಾವರಿ ಖಾತೆಯ ಮೇಲೆ ಕಣ್ಣೀಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.