ಬಾಗಲಕೋಟೆ : ಸಿದ್ದರಾಮಯ್ಯ ಪಕ್ಷಾಂತರ ಪ್ರವೀಣ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್ನಿಂದ ಕಾಂಗ್ರೆಸ್ಗೆ ಬಂದವರು, ಪಕ್ಷಾಂತರದಿಂದಲೇ ರಾಜಕಾರಣ ಮಾಡುತ್ತಿರುವ ಅವರಿಗೆ ಆ ಬಗ್ಗೆ ಮಾತನಾಡುವ ಅಧಿಕಾರವೇ ಇಲ್ಲ ಎಂದರು. ಕಾಂಗ್ರೆಸ್ ಆಡಳಿತ ಸರಿಯಿಲ್ಲ ಎಂದು 17ಜನ ಶಾಸಕರು ಬಿಜೆಪಿಗೆ ಬಂದ ಬಳಿಕ ”ಸೂರ್ಯ,ಚಂದ್ರ ಇರುವುದು ಎಷ್ಟು ಸತ್ಯವೋ, ಅವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ತರುವುದಿಲ್ಲ ಎನ್ನುವುದು ಕೂಡ ಅಷ್ಟೇ ಸತ್ಯ” ಎಂದು ಆಪರೇಷನ್ ಹಸ್ತಕ್ಕೆ ಟಾಂಗ್ ನೀಡಿದರು. ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ 23ಸ್ಥಾನಗಳು ಬರುತ್ತವೆ ಎಂಬುದನ್ನು ಕೇಳಿ ಕಾಂಗ್ರೆಸ್ ನಾಯಕರು ನಿದ್ದೆ ಮಾಡುತ್ತಿಲ್ಲ. ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದರೆ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲೇ ಇರುವುದಿಲ್ಲ, ನಾವು ಕರೆಯದೆ ಇದ್ದರೂ ಅವರೇ (ಕಾಂಗ್ರೆಸ್ ನಾಯಕರು) ದಿಕ್ಕಾಪಾಲಾಗಿ ಹೋಗುತ್ತಾರೆ. ಅಲ್ಲದೆ, ಅವರ ಪಕ್ಷವೂ ಉಳಿಯುವುದಿಲ್ಲ ಎಂದು ಟೀಕಿಸಿದರು.ರಾಜ್ಯ ಸರ್ಕಾರವನ್ನು ಮೂರು ತಿಂಗಳ ಕೂಸಿಗೆ ಹೊಲಿಸಿದ ಮಾಜಿ ಸಚಿವ ಈಶ್ವರಪ್ಪ, ಮಗುವಿಗೆ ಈಗ ಮೂರು ತಿಂಗಳು, ಇನ್ನೊಂದು ಮೂರು ತಿಂಗಳಾಗಲಿ. ಲೋಕಸಭಾ ಚುನಾವಣೆ ಮುಗಿಯಲಿ ಆಗ ಇವರ ಪರಿಸ್ಥಿತಿ ಗೊತ್ತಾಗುತ್ತದೆ ಎಂದರು. ಸರ್ಕಾರದ ವಿರುದ್ಧ ವಿಪಕ್ಷಗಳು ಗುತ್ತಿಗೆದಾರರನ್ನು ಎತ್ತಿಕಟ್ಟಿದ್ದಾರೆಂಬ ಡಿಸಿಎಂ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಡಿಕೆಶಿ ಡಿಸಿಎಂ ಆದ ದಿನದಂದಲೂ ಸಿಎಂ ಅವರಾ? ಅಥವಾ, ಸಿದ್ದರಾಮಯ್ಯನವರೋ? ಎನ್ನುವ ರೀತಿ ಮಾತನಾಡುತ್ತಿದ್ದಾರೆ. ಎಲ್ಲ ಇಲಾಖೆಗಳು ಅವರ ಕೈಯಲ್ಲೇ ಇವೆ ತನಿಖೆ ಮಾಡಿಸಿ ಎಂದರು.ಅಲ್ಲದೆ ಯಾವುದಾದರೊಂದು ಇಲಾಖೆಗೆ ಒಬ್ಬರು ನ್ಯಾಯಾಧೀಶರನ್ನು ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಗೆ 15 ದಿನ ಸಮಯ ನೀಡುವುದರ ಜೊತೆಗೆ ಒಂದು ಕೇಸ್ ಕೊಡಿ. ಕೇವಲ ತನಿಖೆ ಎನ್ನುವ ನೀವು, ನಿಜಕ್ಕೂ ಕಳಕಳಿ ಇದ್ದರೆ ನಿಮ್ಮ ಕಾಲದಿಂದ ಇಲ್ಲಿಯವರೆಗೂ ಅವರಿಂದ ತನಿಖೆ ಮಾಡಿಸಿ ಎಂದು ಸವಾಲು ಹಾಕಿದರು. ಡಿಕೆಶಿಯವರ ಎಲ್ಲ ಸರ್ಕಾರಗಳ ಹಗರಣ ತನಿಖೆ ಮಾಡಿಸುತ್ತೇವೆ ಎಂಬ ಬ್ಲ್ಯಾಕ್ ಮೇಲ್ ತಂತ್ರದ ರಾಜಕಾರಣವನ್ನು ಬಿಜೆಪಿ ನಂಬುವುದಿಲ್ಲ. ಡಿಕೆಶಿ ಯಾವ ಜೈಲಿನಿಂದ ಹೊರಬಂದವರು? ಯಾವ ಬೇಲ್ ಮೇಲೆ ಬಂದವರು? ಯಾವ ಜೈಲಿನಲ್ಲಿ ಇದ್ದವರು? ಎಂಬುದು ಎಲ್ಲರಿಗೂ ಗೊತ್ತಿದೆ ಈ ರೀತಿಯ ಬ್ಲ್ಯಾಕ್ ಮೇಲ್ ತಂತ್ರವನ್ನು ಮಾಡಿದರೆ ಜನರು ನಂಬುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್