Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸುಳ್ಯಪದವು : ಮೈಮೇಲೆ ಮರ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣ ಮೃತ್ಯು

0

ಸುಳ್ಯಪದವು: ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜೂ.5 ರ ಮುಂಜಾನೆ ನಡೆದಿದೆ.

ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಮೃತಪಟ್ಟ ವ್ಯಕ್ತಿ.

ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದು, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಭೀಕರ ಅಪಘಾತ: ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

ಇನ್ನು ಗೋಪಾಲಕೃಷ್ಣ ಅವರು ಪಡುವನೂರು ಗ್ರಾಮದ ಸುಳ್ಳಪದವು ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಸುಳ್ಯ ಪದವು ಯುವ ಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಗೌರವಾಧ್ಯಕ್ಷರಾಗಿ, ಸುಳ್ಯ ಪದವು ಅಯ್ಯಪ್ಪ ಭಜನಾ ಮಂದಿರದ ಬ್ರಹ್ಮಕಲಶ ಸಮಿತಿಯ ಸ್ವಾಗತ ಸಮಿತಿಯ ಸಂಚಾಲಕರಾಗಿ, ಶ್ರೀಶೈಲಂ ಶಾಮಿಯಾನದ ಮಾಲಕರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

Leave A Reply

Your email address will not be published.