Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ಸ್ಪಷ್ಟ ಬಹುಮತ ಇದ್ದರೂ ಅತಿಯಾಗಿ ಮಾಡಲು ಹೋಗಬೇಡಿ’ – ಕಾಂಗ್ರೆಸ್ ವಿರುದ್ದ ಸಿ.ಟಿ ರವಿ ಗರಂ

0

ಬೆಂಗಳೂರು: ನಿಮಗೆ ಸ್ಪಷ್ಟ ಬಹುಮತ ಇದ್ದರೂ ಅತಿಯಾಗಿ ಮಾಡಲು ಹೋಗಬೇಡಿ. ನಾವೇನೂ ಸುಮ್ನೆ ಕೂರುವ ಜನ ಅಲ್ಲ ಎಂದು ಕಾಂಗ್ರೆಸ್‌ಗೆ ಮಾಜಿ ಸಚಿವ ಸಿ.ಟಿ. ರವಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಎಸ್.ಟಿ. ಸೋಮಶೇಖರ್ ಅವರ ಬಗ್ಗೆ ಇತ್ತೀಚೆಗೆ ಕೇಳಿ ಬರುತ್ತಿರುವ ಊಹಾಪೋಹಾಗಳ‌ ಕುರಿತು ಚರ್ಚಿಸಿದ್ದಾರೆ. ಅವರ ಬೆಂಬಲಿಗರನ್ನು ಕಾಂಗ್ರೆಸ್‌ನವರು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಬಿಬಿಎಂಪಿ, ಸ್ಥಳೀಯ ಚುನಾವಣೆಗಳಲ್ಲಿ ಕೆಟಗರಿ ಆಸೆ ತೋರಿಸಿ ಸೆಳೆಯುತ್ತಿದ್ದಾರೆ. ಕಾಂಗ್ರೆಸ್‌ನವರು ಗೆದ್ದರು, ಅಧಿಕಾರಕ್ಕೆ ಏರಿದರು. ಒಂದು ಸ್ಥಿರವಾದ ಸರ್ಕಾರ ಕೊಡಲಿ ಅವರು ಎಂದರು.

‌ಇನ್ನು ನಾವೇನಾದರೂ ಮಾಡಿದರೆ ನೀವು ಮೇಲೇಳಲೂ ಆಗಲ್ಲ. ನಿಮಗೆ ನಮ್ಮವರನ್ನು ಕರೆದುಕೊಳ್ಳುವ ಅನಿವಾರ್ಯತೆ ಏನಿದೆ? ನೀವೇನಾದರೂ ಆಪರೇಷನ್ ಅಂತ ಕೈ ಹಾಕಿದ್ರೆ ಮುಟ್ಟಿ ನೋಡ್ಕೋಬೇಕು ಹಾಗೆ ಮಾಡ್ತೇವೆ ಎಂದು ಹೇಳಿದ್ದಾರೆ.

Leave A Reply

Your email address will not be published.