Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹವಾಮಾನ ವರದಿ: ಸೆ. 2ರ ಬಳಿಕ ಸುಧಾರಿಸಲಿದೆ ಮುಂಗಾರು| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ

0

ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ನಡುವೆ ಹವಾಮಾನ ಇಲಾಖೆ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ ನೀಡಿದೆ.

ಸೆಪ್ಟಂಬರ್ ನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 2ರ ನಂತರ ರಾಜ್ಯವೂ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥರಾದ ಮೃತ್ಯುಂಜಯ ಮೊಹಾಪಾತ್ರ ಮಾಹಿತಿ ನೀಡಿ, ಬಂಗಾಳ ಕೊಲ್ಲಿಯಲ್ಲಿ ಸೆಪ್ಟೆಂಬರ್ 2ರ ನಂತರ ಸೃಷ್ಟಿಯಾಗುವ ಮೇಲ್ಮೈಸುಳಿಗಾಳಿ ಪರಿಸ್ಥಿತಿ ನಂತರ ವಾಯುಭಾರ ಕುಸಿತವಾಗಿ ಮಾರ್ಪಡುವ ಸಾಧ್ಯತೆಯಿದ್ದು, ಇದರಿಂದ ದಕ್ಷಿಣ ಭಾರತ, ಮಧ್ಯ ಭಾರತ, ಪೂರ್ವ ಭಾರತದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.