Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹಿಂದೂ ಮುಖಂಡ ಅರುಣ್ ಪುತ್ತಿಲ ನೇತೃತ್ವದಲ್ಲಿ ಹೊಸ ಸಂಘಟನೆ ಪುತ್ತಿಲ ಪರಿವಾರ

0

ಪುತ್ತೂರು : ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ ರೂಪುಗೊಂಡಿದೆ. ಪುತ್ತಿಲ ಪರಿವಾರ ಹೆಸರಿನಲ್ಲಿ ಹೊಸ ಸಂಘಟನೆ ಇಂದು ಲೋಕಾರ್ಪಣೆಗೊಂಡಿದೆ.

ಇಂದು ನಡೆದ ಪುತ್ತಿಲ ಬೆಂಬಲಿಗರ ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಈ ಹೊಸ ಸಂಘಟನೆ ಹುಟ್ಟುಕೊಂಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ ಈ ಹೊಸ ಸಂಘಟನೆ ಕಾರ್ಯ ನಿರ್ವಹಿಸಲಿದ್ದು, ಆರ್.ಎಸ್.ಎಸ್ ನ ಗುರು ಗೋವಳ್ಕರ್ ಆಶಯದಂತೆ ಪುತ್ತಿಲ ಪರಿವಾರ ಸಂಘ ಕಾರ್ಯ ನಿರ್ವಹಿಸಲಿದೆ ಎಂದು ಸಭೆಯಲ್ಲಿ ಪರಿವಾರದ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಮತ್ತೊಮ್ಮೆ ತಮ್ಮ ಸಂಘಟನಾ ಚಾತುರ್ಯ ತೋರಿಸಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸದ್ಯ ಪುತ್ತೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಪುತ್ತಿಲರ ನಡುವಿನ ಜಟಾಪಟಿ ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ತಲುಪಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Leave A Reply

Your email address will not be published.