ಬೆಂಗಳೂರು : ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ ಮತ್ತು ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್ಎಸ್ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಅಶ್ವತ್ಥನಾರಾಯಣ್ ವಿರುದ್ಧ FIR ದಾಖಲು
2023ರ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಮುಖ್ಯವಾಗಿ ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ. ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್ಎಸ್ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ ಎಂದು ನೇರವಾಗಿ ಜನರಿಗೆ ತಿಳಿಸಿದ್ದಾರೆ.