ಅಚ್ಚರಿ ಆದರೂ ಸತ್ಯ… ರಾಮಮಂದಿರ ಕಟ್ಟಿದ ಬಿಜೆಪಿಯನ್ನೇ ಸೋಲಿಸಿದ ಅಯೋಧ್ಯೆಯ ಜನ!

ಲಕ್ನೋ: ರಾಮಮಂದಿರ ಇರುವ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಅಯೋಧ್ಯೆ ನಗರವು ಹಿಂದೆ ಫೈಜಾಬಾದ್ ಜಿಲ್ಲೆಯಲ್ಲಿದೆ. ಫೈಜಾಬಾದ್ ಜಿಲ್ಲೆಯನ್ನು 2018 ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದರೆ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ.

ಒಂಬತ್ತು ಬಾರಿ ಶಾಸಕರಾಗಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಅವರು ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ 35 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ರಾಮಮಂದಿರದಿಂದ ದೇಶಾದ್ಯಂತ ಹೆಚ್ಚು ಪ್ರಸಿದ್ಧಿ ಪಡೆದಿರುವ ಅಯೋಧ್ಯೆಯ ದೇವಾಲಯ ಪಟ್ಟಣವು ಫೈಜಾಬಾದ್ ಸೀಟಿನ ಅಡಿಯಲ್ಲಿ ಬರುತ್ತದೆ. ಬಿಜೆಪಿಯ ಹಿಂದುತ್ವ ರಾಜಕಾರಣದ ಕೇಂದ್ರವೆಂದೇ ಪರಿಗಣಿಸಲ್ಪಟ್ಟಿರುವ ಅಯೋಧ್ಯೆ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಒಲಿದು ಬಂದಿತ್ತು. ಈ ಬಾರಿ ಸಮಾಜವಾದಿ ಪಾರ್ಟಿ ದಲಿತ ಅವಧೇಶ್ ಪ್ರಸಾದ್ ಅವರನ್ನು ಸಾಮಾನ್ಯ ಸ್ಥಾನದಲ್ಲಿ ನಿಲ್ಲಿಸಿ, ಅದೃಷ್ಟ ಪರೀಕ್ಷೆಗೆ ಇಳಿದಿತ್ತು. ಅದೀಗ ವರ್ಕ್ ಆಗಿದೆ.

Advertisement

ಜನವರಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿನ ಭಗವಾನ್ ರಾಮನ ಪ್ರತಿಷ್ಠಾಪನೆ ಸಮಾರಂಭದ ನೇತೃತ್ವ ವಹಿಸಿದ್ದರು. ಈ ಘಟನೆಯು ಅಯೋಧ್ಯೆಯಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಬಿಜೆಪಿಗೆ ಚುನಾವಣಾ ಲಾಭವನ್ನು ತಂದುಕೊಟ್ಟಿತು. ಯುಪಿಯಲ್ಲಿ ಬಿಜೆಪಿಯ ಪ್ರಚಾರವು ರಾಮ ಮಂದಿರದ ಮೇಲೆ ಕೇಂದ್ರೀಕೃತವಾಗಿತ್ತು. ಆದರೆ, ಅದೇ ಬಿಜೆಪಿಗೆ ತಿರುಬಾಣವಾಗಿದ್ದು, ಮತಗಳು ಸಮಾಜವಾದಿ ಪಕ್ಷದ ಕಡೆಗೆ ತಿರುಗಿವೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement