ಅಣಬೆ ಸಾಂಬಾರು ಸೇವಿಸಿ ಐವರು ಮಕ್ಕಳ ಅಸ್ವಸ್ಥ.!

 

ಶಿವಮೊಗ್ಗ : ಹೊಲದಲ್ಲಿ ಬೆಳೆದಿದಂತಹ ಅಣಬೆಯನ್ನು ತಂದು ಸಾಂಬಾರು ಮಾಡಿ ಸೇವಿಸಿದ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಣಬೆ ಕಿತ್ತು ತಂದು ಸಾಂಬಾರು ಮಾಡಲಾಗಿತ್ತು. ಇದನ್ನು ಮಧ್ಯಾಹ್ನ ಊಟದೊಂದಿಗೆ ತಿಂದ ಐವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಈ ಮಕ್ಕಳು ಒಂದೇ ಕುಟುಂಬದವರಾಗಿದ್ದಾರೆ. ಇದೇ ಆಹಾರ ಸೇವಿಸಿದ ಮನೆಯ ಇತರೆ ಸದಸ್ಯರಿಗೆ ಯಾವುದೇ ಸಮಸ್ಯೆಯಾಗಿಲ್ಲ.ಕೂಡಲೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.

Advertisement

ತಪಾಸಣೆ ನಡೆಸಿದ ವೈದ್ಯರು ಶಿಕಾರಿಪುರ ಆಸ್ಪತ್ರೆಗೆ ಕಳುಹಿಸಿದ್ದರು.ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು.ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ನಟರಾಜ್ ಮಾತನಾಡಿ, ಗ್ರಾಮದಲ್ಲಿ ಬೆಳೆದಿದ್ದ ಅಣಬೆಯಿಂದ ತಯಾರಿಸಿದ್ದ ಸಾಂಬಾರು ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದರು. ಇದೀಗ ಎಲ್ಲರೂ ಆರೋಗ್ಯವಾಗಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement