ಅಪಘಾತಕ್ಕೆ ಕಾರಣವಾಗುವ ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್

ಬೆಂಗಳೂರು: ನಿರ್ಲಕ್ಷ್ಯದಿಂದ ಆಂಬ್ಯುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಸವಾರನಿಗೆ ವಿಚಾರಣಾ ನ್ಯಾಯಲಯ ವಿಧಿಸಿದ್ದ 6 ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ.

ಅಷ್ಟೇ ಅಲ್ಲ ಅಜಾಗರೂಕವಾಗಿ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾದವರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯಾ ಮಾಡಿದಂತಾಗಲಿದೆ ಎಂದು ಹೇಳಿದೆ. ಹಾಗಾಗಿ ತಪ್ಪೆಸಗಿದ್ದ ಆ ಚಾಲಕನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.

ಶಿಕ್ಷೆಯನ್ನು ಖಚಿತ ಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡಿವಳೆ ತಾಲೂಕಿನ ಸಂತೋಷ್ ಎಂಬುವರು ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement