ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿಗೆ ಯೋಗಿ ಸರ್ಕಾರದಿಂದ ಭರ್ಜರಿ ಸಿದ್ಧತೆ

ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಈ ಬಾರಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಯೋಗಿ ಸರ್ಕಾರ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಯೋಜನೆಯನ್ನು ಯೋಗಿ ಸರ್ಕಾರ ಹಾಕಿಕೊಂಡಿದೆ. ದೀಪಾವಳಿಯಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿಯಾಗುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ವಿಶೇಷ ಮೇಣದ ದೀಪಗಳನ್ನು ಬಳಸಲಾಗುತ್ತದೆ. ದೀರ್ಘಕಾಲದವರೆಗೆ ಈ ದೀಪಗಳು ಬೆಳಗಲಿವೆ. ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖವಾಗಿರಲಿದೆ. ಈ ದೀಪಾವಳಿಯಲ್ಲಿ ಅಯೋಧ್ಯೆಯನ್ನು ಕೇವಲ ಧರ್ಮ ಮತ್ತು ನಂಬಿಕೆಯ ಕೇಂದ್ರವನ್ನಾಗಿ ಮಾಡದೆ, ಸ್ವಚ್ಛತೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವನ್ನಾಗಿ ಮಾಡುವ ಗುರಿಯನ್ನು ದೇವಾಲಯದ ಟ್ರಸ್ಟ್ ಹೊಂದಿದೆ. 2,000 ಕ್ಕೂ ಹೆಚ್ಚು ಮೇಲ್ವಿಚಾರಕರು, ಉಸ್ತುವಾರಿಗಳು ಮತ್ತು ಇತರ ಸದಸ್ಯರ ಮಾರ್ಗದರ್ಶನದಲ್ಲಿ 30,000 ಕ್ಕೂ ಹೆಚ್ಚು ಸ್ವಯಂಸೇವಕರು 28 ಲಕ್ಷ ದೀಪಗಳನ್ನು ಸರಯೂ ನದಿಯ ಉದ್ದಕ್ಕೂ 55 ಸಾಲುಗಳಲ್ಲಿ ಅಲಂಕರಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Advertisement

ವಿಶೇಷ ಹೂವಿನ ಅಲಂಕಾರದಿಂದ ಕಂಗೊಳಿಸಲಿರುವ ರಾಮ ಮಂದಿರ ಸಂಕೀರ್ಣವನ್ನು ಅಲಂಕಾರಕ್ಕಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗಕ್ಕೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗಿದೆ. ಬೆಳಕು, ಪ್ರವೇಶ ಕಮಾನು ಅಲಂಕಾರಗಳು ಮತ್ತು ಸಂಪೂರ್ಣ ಶುಚಿಗೊಳಿಸುವಿಕೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಬಿಹಾರ ಕೇಡರ್‌ನ ನಿವೃತ್ತ ಐಜಿ ಅಶು ಶುಕ್ಲಾ ಅವರಿಗೆ ವಹಿಸಲಾಗಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement