ಅಸ್ತಿ ಗಳಿಕೆ ಪ್ರಕರಣ: ‘ಕಾನೂನು ಚೌಕಟ್ಟಿನಲ್ಲೇ ಉತ್ತರ ಕೊಡುತ್ತೇನೆ’- ಡಿಕೆ.ಶಿ

ಬೆಂಗಳೂರು: ನನ್ನನ್ನು ಒಂದು ದಿನ ಸಹ ವಿಚಾರಣೆಗೆ ಕರೆಸಿಲ್ಲ 90% ರಷ್ಟು ತನಿಖೆ ಪೂರ್ಣ ಆಗಿದೆ ಎಂದು ಹೇಗೆ ಹೇಳಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಅದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಅಂದಿರುವ ವಿಚಾರಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ನನ್ನನ್ನು ಕರೆದು ನನ್ನ ಆಸ್ತಿಯನ್ನು ಕೇಳಬೇಕು. ನನ್ನ ಆಸ್ತಿ ಯಾವುದು? ನನ್ನ ಹೆಂಡತಿಯ ಆಸ್ತಿ ಯಾವುದು ಅಂತ ಕೇಳಬೇಕು. ಅದು ಹೇಗೆ 90% ರಷ್ಟು ತನಿಖೆ ಪೂರ್ಣ ಮಾಡಿದ್ದಾರೋ ನನಗೆ ಅರ್ಥ ಆಗುತ್ತಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ಕಾನೂನು ಚೌಕಟ್ಟಿನಲ್ಲೇ ಉತ್ತರ ಕೊಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಪ್ರಕರಣದಲ್ಲಿ ಎಫ್‌ಐಆರ್ ಹಾಕಿರೋದು ಸರಿ ಇಲ್ಲ ಅಂತ ನ್ಯಾಯಾಲಯಕ್ಕೆ ಹೋಗಿದ್ದೆ. ಯಡಿಯೂರಪ್ಪ ಸರ್ಕಾರ ಇದ್ದಾಗ ಸಿಬಿಐಗೆ ತನಿಖೆಗೆ ಅವಕಾಶ ಕೊಟ್ಟಿದ್ರು. ಈಗ 90% ರಷ್ಟು ತನಿಖೆ ಪೂರ್ಣ ಆಗಿದೆ ಅಂತ ಹೇಳಿದ್ದಾರೆ. ನನ್ನ ಒಂದು ದಿನ ಸಹ ವಿಚಾರಣೆಗೆ ಕರೆಸಿಲ್ಲ ಎಂದು ಹೇಳಿದರು.

Advertisement

ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಹೋಗುವ ಕುರಿತು ಇನ್ನು ತೀರ್ಮಾನಿಸಿಲ್ಲ. ಈಗಷ್ಟೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ತಿಂಗಳ ಒಳಗಾಗಿ ತನಿಖೆ ಪೂರ್ಣ ಮಾಡಲು ಹೇಳಿದ್ದಾರೆ. ನನಗೆ ನೋಟಿಸ್ ಕೊಟ್ಟು ಕರೆದು ಉತ್ತರ ಕೇಳಿ ಏನೇನು ಮಾಡ್ತಾರೋ ಅನ್ನವುದು ಕಾದುನೋಡೋಣ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement