ಆಸ್ಪತ್ರೆಗೆ ಭೇಟಿ ನೀಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ತೆರಳಿದ ಸಿದ್ದರಾಮಯ್ಯ ಅವರು, ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಮಂಡಿ ಶಸ್ತ್ರಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಹೃದಯದಲ್ಲಿ ಬ್ಲಾಕೇಜ್‌ ಇರುವುದು ಕಂಡುಬಂದಿತ್ತು. ಬಳಿಕ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. ಕಳೆದ ತಿಂಗಳು ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾಗಲೂ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಮಾತಾಡಿಸಿದ್ದರು. ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಕೂಗಾಡಿ ಅಧಿಕ ರಕ್ತದೊತ್ತಡಕ್ಕೊಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಹ ಸಿದ್ದರಾಮಯ್ಯ ಹಾಸ್ಪಿಟಲ್ ಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement