ಇಂದಿನಿಂದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಸತ್ತು ಕಡ್ಡಾಯ.!

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07ರ ಇಂದಿನಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.

ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಅ.07ರ ಇಂದಿನಿಂದ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement