ಇಸ್ರೇಲ್‌ನಿಂದ 212 ಭಾರತೀಯರನ್ನು ಹೊತ್ತು ದೆಹಲಿಗೆ ಬಂದಿಳಿದ ಮೊದಲ ವಿಮಾನ – ಸರ್ಕಾರದಿಂದ ಫೋಟೋ ಬಿಡುಗಡೆ

ನವದೆಹಲಿ: ‘ಆಪರೇಷನ್ ಅಜಯ್’ ಅಡಿಯಲ್ಲಿ ಮೊದಲ ವಿಮಾನವು 212 ಭಾರತೀಯ ಪ್ರಜೆಗಳೊಂದಿಗೆ ಯುದ್ಧ ಪೀಡಿತ ಇಸ್ರೇಲ್‌ನಿಂದ ದೆಹಲಿಗೆ ಶುಕ್ರವಾರ ಮುಂಜಾನೆ ಬಂದಿಳಿದಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಇಸ್ರೇಲ್‌ನಿಂದ ಹಿಂದಿರುಗಿದ ಪ್ರಯಾಣಿಕರಲ್ಲಿ ಒಬ್ಬರು ಭಾರತೀಯ ಪ್ರಜೆಗಳನ್ನು ತಾಯ್ನಾಡಿಗೆ ಕರೆತಂದಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಈ ಸಂಬಂಧ ಫೋಟೋಗಳನ್ನು ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಸ್ವಾಗತ ತಾಯ್ನಾಡಿಗೆ!” ಎಂದು ಬರೆದುಕೊಂಡಿದ್ದಾರೆ. ಹಮಾಸ್ ದಾಳಿಯ ನಂತರ ಇಸ್ರೇಲ್‌ನಿಂದ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಬುಧವಾರ ‘ಆಪರೇಷನ್ ಅಜಯ್’ ಅನ್ನು ಪ್ರಾರಂಭಿಸಿತು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement