ಈ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

    ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆ.

ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಮತ್ತು ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141 ಇವರನ್ನು ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಡಾ.ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon