ಉಡುಪಿ: ಮಹಿಷಾ ದಸರಾಗೆ ನಿರ್ಬಂಧ – ಜಿಲ್ಲಾಧಿಕಾರಿ ಆದೇಶ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಹಿಷಾ ದಸರಾ ನಡೆಸಲು ಮುಂದಾಗಿರುವವರಿಗೆ ಉಡುಪಿ ಜಿಲ್ಲಾಧಿಕಾರಿ ಶಾಕ್ ಕೊಟ್ಟಿದ್ದು, ಮಹಿಷಾ ದಸರಾಗೆ ಸಂಬಂಧಿಸಿದಂತೆ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ದಿನಾಂಕ:14.10.2023 ಮತ್ತು 15.10.2023 ರಂದು ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುವುದರಿಂದ ಮಹಿಷ ದಸರ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿದ್ದಾರೆ. ಅಲ್ಲದೆ ಕೆ.ಪಿ. ಆಕ್ಟ್ 1963ರ ಕಲಂ 35 ರಡಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದಿನಾಂಕ: 14.10.2023 ಬೆಳಿಗ್ಗೆ 6.00 ರಿಂದ ಜಾರಿಗೆ ಬರುವಂತೆ ಹಾಗೂ ದಿನಾಂಕ: 15.10.2023 ರ ಸಂಜೆ 06.00 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ. ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement