ಒಳನುಸುಳುವಿಕೆ ಯತ್ನ – ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವ ಘಟನೆ ನಡೆದಿದೆ.

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಗಡಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿತ್ತು. ಇನ್ನು ನಿರಂತರ ಮಳೆ ಕಡಿಮೆ ಗೋಚರತೆ ಹಾಗೂ ಕೆಟ್ಟ ಹವಾಮಾನದ ಲಾಭ ಪಡೆದು ಶಸ್ತ್ರಸಜ್ಜಿತ ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯನ್ನು ದಾಟಲು ಪ್ರಯತ್ನಪಟ್ಟಿದ್ದು ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement