ಕರಾವಳಿಯಲ್ಲಿ ಮಳೆ ಹಾನಿ – ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಬಂಟ್ವಾಳ: ಕಾರು ಪಲ್ಟಿ- ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು

Advertisement

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement