ಕರುವಿನಕಟ್ಟೆ ವೃತ್ತದಲ್ಲಿ ಹೋಳಿಗೆಮ್ಮ ಹಬ್ಬದ ಹೋಳಿಗೆ ಘಮ..ಘಮ.!

 

ಚಿತ್ರದುರ್ಗ : ಉತ್ತಮ ಮಳೆ, ಬೆಳೆ ಮತ್ತು ಜನ -ಜಾನುವಾರುಗಳ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿದ ಜನತೆ ’ಹೋಳಿಗೆಮ್ಮ’ ಹಬ್ಬವನ್ನು ಆಚರಿಸಿ, ಊರಮ್ಮಳನ್ನು ತೃಪ್ತಿಪಡಿಸಿದ್ದಾರೆ.

ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ಸಾರಿಯೂ ಸಹಾ ಹೋಳಿಗೆಮ್ಮನನ್ನು ಆಚರಣೆ ಮಾಡಲಾಯಿತು ಇದು ವಿಶಿಷ್ಟವಾದ ಆಚರಣೆ. ಸಂಪ್ರದಾಯ. ಈ ಹಬ್ಬದ ಆರಣೆಯಿಂದಾಗಿಯೇ ತಾಲೂಕಿನಲ್ಲಿ ಯಾವುದೇ ಭೀಕರ ರೋಗ- ರುಜಿನಗಳು, ಪ್ರಕೃತಿ ವಿಕೋಪಗಳು ನಡೆಯುತ್ತಿಲ್ಲ. ಆ ಕಾರಣ ನಾವೆಲ್ಲರೂ ಜಾತ್ಯತೀತರಾಗಿ ಈ ಹಬ್ಬವನ್ನು ಆಚರಿಸುತ್ತೇವೆ ಎನ್ನುತ್ತಾರೆ ಇಲ್ಲಿಯ ಹೆಂಗಳೆಯರು.

Advertisement

ಗೃಹಿಣಿಯರು ಶ್ರದ್ಧೆ, ಭಕ್ತಿ ಮತ್ತು ಮಡಿವಂತಿಕೆಯಿಂದ ಹೂರಣ ಮಾಡಿ, ಹೋಳಿಗೆ ಬೇಯಿಸಿ, ನಾನಾ ರೀತಿ ಅಡುಗೆಗಳನ್ನು ಸಿದ್ಧಪಡಿಸುತ್ತಾರೆ. ಆ ನಂತರ ಮಡಿಕೆಯಲ್ಲಿ ಅವುಗಳೆಲ್ಲವನ್ನೂ ಬೇವಿನ ಎಲೆಯ ಜೊತೆಯಲ್ಲಿ ಇರಿಸಿ, ಪೂಜೆ ಮಾಡುತ್ತಾರೆ. ನಗರದ ಕರುವಿನಕಟ್ಟೆ ವೃತ್ತದಲ್ಲಿನ ದೇವಾಲಯದ ಮುಂದೆ ಮಡಿಕೆಯನ್ನು ಇರಿಸಿ, ದೇವಿಗೆ ನಮಸ್ಕಾರ ಮಾಡಿ, ಪ್ರಾರ್ಥನೆ ಸಲ್ಲಿಸಿ, ನೈವೇದ್ಯ ಮಾಡುವುದು ವಾಡಿಕೆ.ಈ ಆಚರಣೆಯ ಹಿನ್ನೆಲೆ – ಇತಿಹಾಸ ಇಲ್ಲಿನ ಜನರಿಗೆ ತಿಳಿದಿಲ್ಲ. ಆದರೂ ಈ ಹಬ್ಬದ ಆಚರಣೆ ತಪ್ಪಿಲ್ಲ, ಯಾರೂ ಕೈ ಬಿಟ್ಟಿಲ್ಲ. ಪ್ರತೀ ವರ್ಷ ತಪ್ಪದೇ ನಿಗದಿತ ದಿನದಂದು, ನಕ್ಷತ್ರ-ತಿಥಿ ಆಧರಿಸಿ ಆಚರಣೆ ಆಗುತ್ತಿದೆ. ಜೂನ್ ೩೦ರ ಇಂದು ಮಂಗಳವಾರ ಹೋಳಿಗೆಯಮ್ಮ ಹಬ್ಬವನ್ನು ಊರವರು ಅದ್ಧೂರಿಯಾಗಿ ಮನೆ ಮನೆಯಲ್ಲೂ ಆಚರಣೆ ಮಾಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement