ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತಿನಲ್ಲಿ 3 ಫೇಸ್ ವಿದ್ಯುತ್ ಪೂರೈಕೆ- ಸಿಎಂಗೆ ಖಂಡ್ರೆ ಮನವಿ

ಬೆಂಗಳೂರು: ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸಲು ಹಗಲು ಹೊತ್ತಿನಲ್ಲಿ ಕಾಡಂಚಿನ ಗ್ರಾಮಗಳಿಗೆ 3 ಫೇಸ್ ವಿದ್ಯುತ್ ಪೂರೈಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಕಾಡಿನಂಚಿನ ಪ್ರದೇಶಗಳಲ್ಲಿ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡುಪ್ರಾಣಿಗಳು ರಾತ್ರಿ ಹೊತ್ತಿನಲ್ಲೇ ಸಂಚಾರಿಸುತ್ತದೆ ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಉಂಟಾಗುತ್ತಿದೆ ಎಂದರು.

ಇನ್ನು ಕಾಡಿನಂಚಿನ ಗ್ರಾಮಗಳಿಗೆ ರಾತ್ರಿ ವೇಳೆ 3 ಫೇಸ್ ವಿದ್ಯುತ್ ಪೂರೈಸಿದರೆ ಬಹುತೇಕ ರೈತರು ಪಂಪ್‌ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ಹೋಗುತ್ತಾರೆ. ಇದ್ದರಿಂದ ವನ್ಯಜೀವಿ ಮತ್ತು ಮನುಷ್ಯರಿಗೂ ತೊಂದರೆ ಆದ್ದರಿಂದ ಇಂತಹ ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲೇ 3 ಫೇಸ್ ವಿದ್ಯುತ್ ಪೂರೈಕೆ ಮಾಡುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

ಇದರ ಜೊತೆಗೆ ಇಂಧನ ಇಲಾಖೆ ಸಚಿವರಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಹಾಗೂ ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement