ಕಾಡು ಹಂದಿಗಳಿಗೆ ಇಟ್ಟ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕ ಮೃತ್ಯು..!

ಪಾಲಕ್ಕಾಡ್: ಕಾಡು ಹಂದಿಗಳಿಗಾಗಿ ಇಟ್ಟಿದ್ದ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕ ಮೃತಪಟ್ಟಿದ್ದು, ಇದರಿಂದ ಆತಂಕಗೊಂಡಿರುವ ಜಮೀನಿನ ಮಾಲಕ, ಆ ಯುವಕರ ದೇಹಗಳನ್ನು ತನ್ನ ಜಮೀನಿನಲ್ಲೇ ಹೂತ ಘಟನೆ ಕೇರಳದಲ್ಲಿ ನಡೆದಿ

ಮಂಗಳವಾರ ಕೊಡುಂಬುವಿನ ಅಂಬಲಪರಂಬು ಗ್ರಾಮದ ಪಲ್ನೀರಿ ಕಾಲನಿಯಲ್ಲಿ ಇಬ್ಬರು ಯುವಕರ ದೇಹದ ಭಾಗಗಳು ಜಮೀನೊಂದರಲ್ಲಿ ಪತ್ತೆಯಾಗಿದ್ದವು.

ಈ ಕುರಿತು ಜಮೀನಿನ ಮಾಲಕನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.

Advertisement

ಗಾಬರಿಯಿಂದ ತಾನು ಹಾಗೆ ಮಾಡಿದೆ ಎಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಮೃತ ಯುವಕರ ದೇಹಗಳು ಪತ್ತೆಯಾದ ಜಮೀನಿನ ಮಾಲಕ ಅಂಬಲಪರಂಬು ವೀಟ್ಟಿಲ್ ಅನಂತನ್ (52) ಇದೀಗ ಪೊಲೀಸರ ವಶದಲ್ಲಿದ್ದಾನೆ.

ಆ ಯುವಕರ ಸಾವಿಗೆ ಮತ್ತೇನಾದರೂ ಕಾರಣವಿತ್ತೆ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement