ಕೆಂಪು ಕೋಟೆಯಲ್ಲಿ ಇಂದು ಪರಾಕ್ರಮ್ ದಿವಸ್ ಆಚರಣೆ – ಪ್ರಧಾನಿ ಮೋದಿ ಭಾಗಿ

ನವದೆಹಲಿ:ಕೆಂಪು ಕೋಟೆಯಲ್ಲಿ ಇಂದು ನಡೆಯುವ ಪರಾಕ್ರಮ್ ದಿವಸ್ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ.

ನೇತಾಜಿ ಎಂದೇ ಪ್ರಸಿದ್ಧರಾದ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಮುಖ ಕ್ರಾಂತಿಕಾರಿ ಹೋರಾಟಗಾರರಾಗಿದ್ದರು. ಅವರು ಜನವರಿ 23,1897ರಂದು ಒರಿಸ್ಸಾದ ಕಟಕ್‌ನಲ್ಲಿ ಜನಿಸಿದ್ದು, ಈ ದಿನವನ್ನು ಪ್ರತಿ ವರ್ಷ ಪರಾಕ್ರಮ್ ದಿವಸ್ ಆಚರಣೆ ಮಾಡಲಾಗುತ್ತಿದ್ದು ಕೆಂಪು ಕೋಟೆಯಲ್ಲಿ ಇಂದು ನಡೆಯುವ ಪರಾಕ್ರಮ್ ದಿವಸ್ ಆಚರಣೆಯಲ್ಲಿ ಪ್ರಧಾನಿ ಮೋದಿಯವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬೋಸ್ ಅವರ ಅಪರೂಪದ ಛಾಯಾಚಿತ್ರಗಳು ಮತ್ತು ನೇತಾಜಿ ಮತ್ತು ಆಜಾದ್ ಹಿಂದ್ ಫೌಜ್ ಅವರ ಗಮನಾರ್ಹ ಪ್ರಯಾಣವನ್ನು ವಿವರಿಸುವ ದಾಖಲೆಗಳನ್ನು ಪ್ರದರ್ಶಿಸಲಾಗುತ್ತದೆ.ಇದೇ ವೇಳೆ ದೇಶದ ಶ್ರೀಮಂತ ವೈವಿಧ್ಯತೆಯನ್ನು ಪ್ರದರ್ಶಿಸಲು ಮತ್ತು ವಿಭಿನ್ನ ಸಂಸ್ಕೃತಿಗಳನ್ನು ಪ್ರದರ್ಶಿಸಲು ಒಂಬತ್ತು ದಿನಗಳ ಕಾರ್ಯಕ್ರಮವಾದ ಭಾರತ್ ಪರ್ವ್ ಯೋಜನಗೆ ಪ್ರಧಾನಿಗಳು ಚಾಲನೆ ನೀಡಲಿದ್ದಾರೆ.

Advertisement

ಇನ್ನು ಈ ಭಾರತ್ ಪರ್ವ್ ಕಾರ್ಯಕ್ರಮವು ಜನವರಿ 23 ಮತ್ತು 31 ರ ನಡುವೆ ನಡೆಯಲಿದೆ.”ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ದಿಗ್ಗಜರ ಕೊಡುಗೆಯನ್ನು ಗೌರವಯುತವಾಗಿ ಗೌರವಿಸಲು ಕ್ರಮಗಳನ್ನು ಕೈಗೊಳ್ಳಲು ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಪ್ರಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು 2021 ರಲ್ಲಿ ಪರಾಕ್ರಮ್ ದಿವಸ್ ಎಂದು ಆಚರಿಸಲು ಪ್ರಾರಂಭಿಸಲಾಯಿತು.

ಈ ಕಾರ್ಯಕ್ರಮವು ರಾಮ್ ಲೀಲಾ ಮೈದಾನದಲ್ಲಿ ಮತ್ತು ಕೆಂಪು ಕೋಟೆಯ ಮುಂಭಾಗದಲ್ಲಿರುವ ಮಾಧವ್ ದಾಸ್ ಪಾರ್ಕ್‌‌ನಲ್ಲಿ ನಡೆಯಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement