ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ

 

ಶಿವಮೊಗ್ಗ: ಒಂದನೇ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರಿಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN  ದಲ್ಲಿ ಆರ್ಥಿಕ ನೆರವು (ಫೈನಾನ್ಷಿಯಲ್ ಅಸಿಸ್ಟೆನ್ಸ್) ಎಂಬ ಶೀರ್ಷಿಕೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, 2024 ನವೆಂಬರ್ 30 ಕೊನೆಯ ದಿನವಾಗಿದೆ.

Advertisement

ಕೇಂದ್ರಿಯ ಸೈನಿಕ ಮಂಡಳಿಯ ಮಾರ್ಗಸೂಚಿಯಂತೆ ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸಿದವರು, ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಸಂಬಂಧಿತ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಖುದ್ದಾಗಿ ಭೇಟಿ ಅನುಮೋದನೆ ಪಡೆಯಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement