ಕೇರಳದಲ್ಲಿ ಆರೋಪಿಗಳಿಂದ ಲಂಚ ಪಡೆಯಲು ಹೋಗಿ ಅರೆಸ್ಟ್ ಆದ ಕರ್ನಾಟಕ ಪೊಲೀಸರು….!!

ತಿರುವನಂತಪುರಂ: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ ಆಗಸ್ಟ್ 1 ರಂದು ಕೊಚ್ಚಿಗೆ ಬಂದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆನ್‌ಲೈನ್ ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್‌ಫೀಲ್ಡ್‌ನಿಂದ ಕರ್ನಾಟಕ ತಂಡವು ಅಖಿಲ್ ಮತ್ತು ನಿಖಿಲ್ ಅವರನ್ನು ಬಂಧಿಸಲು ಕೇರಳಕ್ಕೆ ಬಂದಿದ್ದು, ಪ್ರಕರಣದ ಇತ್ಯರ್ಥಕ್ಕೆ ಆರೋಪಿಯಿಂದ 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅವರು ಆರೋಪಿಗಳಲ್ಲಿ ಒಬ್ಬರಿಂದ ಒಂದು ಲಕ್ಷ ರೂ. ಇತರ ಆರೋಪಿಗಳ ತಂದೆಯಿಂದ 3 ಲಕ್ಷ ರೂಪಾಯಿ ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿದ್ದು. ಈ ಸಂಬಂಧ ದೂರಿನ ಆಧಾರದ ಮೇಲೆ ಕೊಚ್ಚಿಯಲ್ಲಿರುವ ಕಲಮಸ್ಸೆರಿ ಪೊಲೀಸರು ಬುಧವಾರ ಸಂಜೆ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಸ್ಟಡಿಯಲ್ಲಿರುವ ಪೊಲೀಸ್ ಅಧಿಕಾರಿಗಳ ವಿವರಗಳು ಮತ್ತು ಕೊಚ್ಚಿಗೆ ಭೇಟಿ ನೀಡುವ ಉದ್ದೇಶವನ್ನು ಪರಿಶೀಲಿಸಲು ರಾಜ್ಯ ಪೊಲೀಸರು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬೇಬಿ ಪಿವಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement