ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಆತ್ಮಹತ್ಯೆ..!

ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಟ, ನಿರ್ದೇಶಕ , ನಿರ್ಮಾಪಕರಾಗಿ ಸಕ್ರಿಯರಾಗಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ನಿನಾ ಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ಬಂದಿದ್ದರು ಎಂದು ಹೇಳಲಾಗುತ್ತಿದೆ. ಅತಿಥಿ, ಬೇರು, ತುತ್ತೂರಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದಾರೆ.

ಇನ್ನೂ ಕರಿಮಣಿ , ಶಾಂತಂಪಾಪಂ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ಅವರು ನಿರ್ದೇಶನ ಮಾಡಿದ್ದಾರೆ. ನೀನಾಸಂ ಸತೀಶ್ ನಟನೆಯ ಅಶೋಕ್ ಬ್ಲೇಡ್ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಮುಂದಿನ ವರ್ಷ ಸಿನಿಮಾ ಚಿತ್ರೀಕರಣ ಶುರು ಮಾಡಬೇಕಿತ್ತು. ಪಿ. ಶೇಷಾದ್ರಿ, ಟಿ ಎನ್, ಸೀತಾರಾಮ್ ಅವರ ಜೊತೆ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೂಡ ಕೆಲಸ ಮಾಡಿದ್ದರು. ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement