ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್‌ ಪಲ್ಟಿ: ಇಬ್ಬರು ಸಾವು

ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್‌ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ   ಚಿಕ್ಕಮಗಳೂರು ತರೀಕೆರೆ ತಾಲೂಕಿನ ಭೈರಾಪುರ ಗೇಟ್‌ ಬಳಿ ನಡೆದಿದೆ.

ಶ್ರೀಧರ್‌ (20) ಧನುಷ್‌ (20) ಮೃತರು. ಗಣೇಶ ಮೂರ್ತಿ ತರಲು 9 ಜನ ಯುವಕರು ಹೋಗುತ್ತಿದ್ದರು.
ಭೈರಾಪುರ ಗೇಟ್‌ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್‌ ಪಲ್ಟಿಯಾಗಿದೆ. ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರಿಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement