ಗಮನ ಸೆಳೆದ ನಾರಿ ಪೂಜೆ : ಕೇರಳದ ದೇಗುಲದಲ್ಲಿ ನಟಿ ಖುಷ್ಬೂ ಪಾದ ಪೂಜೆ

ಕೇರಳ: ಬಹುಭಾಷಾ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರಿಗೆ ಕೇರಳದ ದೇಗುಲದಲ್ಲಿ ನಾರಿ ಪೂಜೆ ನೆರವೇರಿಸಲಾಗಿದೆ. ಕೇರಳದ ತ್ರಿಶೂರ್‌ನ ವಿಷ್ಣುಮಾಯಾ ದೇವಸ್ಥಾನದಲ್ಲಿ ಖುಷ್ಬೂ ಅವರಿಗೆ ಸುಹಾಸಿನಿ ಪೂಜಾ ಎಂದು ಕರೆಯಲಾಗುವ ನಾರಿ ಪೂಜೆಯನ್ನು ಇತ್ತೀಚೆಗೆ ನೆರವೇರಿಸಿರುವುದು ಗಮನ ಸೆಳೆದಿದೆ. ಈ ದೇವಸ್ಥಾನದ ಆಚರಣೆಗಳ ಪ್ರಕಾರ ಪ್ರತಿ ವರ್ಷ ಒಬ್ಬ ಮಹಿಳೆಯನ್ನು ಆಮಂತ್ರಿಸಿ ಶಾಸ್ತ್ರೋಕ್ತವಾಗಿ ಪಾದಪೂಜೆ ಮಾಡಿ ವಿಧಿವಿಧಾನ ನೆರವೇರಿಸಲಾಗುತ್ತದೆ. ಪೂಜಾರಿಗಳು ಮಹಿಳೆಯನ್ನು ದೇವತೆಗೆ ಹೋಲಿಸಿ ಪೂಜೆ ಮಾಡುವುದು ಇಲ್ಲಿ ವಿಶೇಷ. ಈ ವೇಳೆ ಪೂಜಾರಿಗಳು ಖುಷ್ಬೂ ಅವರ ಪಾದಪೂಜೆ ಮಾಡಿ, ಮಾಲೆ ಹಾಕಿ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದ್ದಾರೆ. ಈ ವಿಷಯವನ್ನು ಖುಷ್ಬೂ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ‘ವಿಷ್ಣುಮಾಯಾ ದೇವಸ್ಥಾನದವರು ನಾರಿಪೂಜೆಗೆ ನನ್ನನ್ನು ಆಮಂತ್ರಿಸಿದ್ದು ನಿಜಕ್ಕೂ ನನ್ನ ಅದೃಷ್ಠ. ಇದಕ್ಕಾಗಿ ನಾನು ವಿನೀತಳಾಗಿದ್ದೇನೆ. ಎಂದು ಬರೆದುಕೊಂಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement