ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ

ಅಯೋಧ್ಯೆ: ರಾಮ ಮಂದಿರದಲ್ಲಿ ಇಂದು ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಸದಸ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ರಾತ್ರಿ ವಿಶೇಷ ಪೂಜೆಯೊಂದಿಗೆ ರಾಮಲಲ್ಲಾನ ವಿಗ್ರಹವನ್ನು ಗರ್ಭಗುಡಿಗೆ ತರಲಾಯಿತು.

ಇನ್ನು ಈ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿದ್ದು, ಬಳಿಕ ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು.

Advertisement

ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ಕಲಶ ಪೂಜೆ ಇಂದು ನಡೆದಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement