ಬೆಂಗಳೂರು: ರಾಜ್ಯ ಸರ್ಕಾರ 5 ಗ್ಯಾರೆಂಟಿ ಘೋಷಣೆ ಮಾಡಿ, ಸದ್ಯ 4 ಯೋಜನೆಗಳನ್ನು ಜಾರಿಗೊಳಿಸಿದೆ. ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಸಚಿವ H.K ಪಾಟೀಲ್ ತಿಳಿಸಿದ್ದಾರೆ
ಅದರಂತೆಯೇ ಗೃಹಲಕ್ಷ್ಮಿ ಯೋಜನೆಯಲ್ಲೂ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟವು ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿದೆ. ‘ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆ ಅನ್ವಯವಾಗಲಿದೆಯಂತೆ.
‘ಜೊತೆಗೆ ನ್ಯಾಯಾಲಯಗಳ ಸ್ಥಾಪನೆಗೆ ಸಂಪುಟ ಒಪ್ಪಿಗೆ ನೀಡಿದ್ದು, ‘ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದರು.
2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಈಗ ಜಾರಿಗೆ ಮಾಡಲಾಗುತ್ತಿದೆ ಎಂದರು. ಅಲ್ಲದೆ, ರಾಜ್ಯದಲ್ಲಿ ಈಗಾಗಲೇ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅದರ ಜೊತೆಗೆ 21 ತಾಲ್ಲೂಕುಗಳ ಸೇರಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.