ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್.!

 

 

ಕಲಬುರಗಿ : ಪ್ರಚೋದನಾಕಾರಿ ಭಾಷಣ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡುತ್ತಾರೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕಲ್ಬುರ್ಗಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾ ಆಡಳಿತ ಆದೇಶ ಹೊರಡಿಸಿತು.

Advertisement

ಆದರೆ ಈ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಚಕ್ರವರ್ತಿ ಸೂಲಿಬೆಲೆಗೆ ಹೈಕೋರ್ಟ್ ಅವಕಾಶ ನೀಡಿದೆ.!

ಚಿತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಕಲಬುರಗಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್‌ ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು.

ಅದರಂತೆ ಜಿಲ್ಲಾ ಪೊಲೀಸರು ಭಾಲ್ಕಿಯಿಂದ ಕಲಬುರಗಿಗೆ ಆಗಮಿಸುತ್ತಿದ್ದ ಚಕ್ರವರ್ತಿ ಸೂಲಿಬಲೆ ಅವರನ್ನು ಕಮಲಾಪುರ ಬಳಿಯೇ ವಶಕ್ಕೆ ಪಡೆದು ಹಳ್ಳಿಖೇಡ ಊರಲ್ಲಿ ರಾತ್ರಿ ತಂಗುವಂತೆ ಮಾಡಿದ್ದರು. ಇದರ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement