‘ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ’- ಸಿಎಂ

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಉಚ್ಚ ನ್ಯಾಯಾಲಯದ ಆದೇಶ ಬರುವ ಮುನ್ನವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಪಕ್ಷ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿ ಸುಳ್ಳು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇನ್ನು ಈ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೆಂಗಳೂರು ಬಂದ್ ಮಾಡುವುದು ಬೇಡ, ಬಂದ್ ಮಾಡುವುದರಿಂದ ಯಾವುದೇ ಅನುಕೂಲ ಆಗಲ್ಲ ಎಂದು ಮನವಿ ಮಾಡಿದರು.

Advertisement

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಹೋರಾಟ ಮಾಡಬಹುದು. ಅವರವರ ಹೋರಾಟ ಅವರು ಮಾಡುತ್ತಾರೆ, ನಾವು ರಾಜ್ಯದ ಹಿತ ಕಾಪಾಡುತ್ತಿದ್ದೇವೆʼʼ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement