ಚಾರ್ಮಾಡಿಯಲ್ಲಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್‌ ಲಾರಿ- ತಪ್ಪಿದ ಅನಾಹುತ

ಕೊಟ್ಟಿಗೆಹಾರ: ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದೆ. ತಕ್ಷಣ ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ
ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement