ಚೆನ್ನೈ -ಬೆಂಗಳೂರು ಗ್ರೀನ್‌ ಫೀಲ್ಡ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಡಿಸೆಂಬರ್‌ ವೇಳೆ ಪೂರ್ಣ- ನಿತಿನ್‌ ಗಡ್ಕರಿ

ನವದೆಹಲಿ:ಚೆನ್ನೈ -ಬೆಂಗಳೂರು ಗ್ರೀನ್‌ ಪೀಲ್ಡ್‌ ಎಕ್ಸ್ಪ್ರೆಸ್ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ಅವರು, ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಈ ವೇಳೆ ಅವರು ಆಗ್ರಹಿಸಿದರು.

ಡಿಸೆಂಬರ್‌ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣ ಮೂಲಕ ಚೆನ್ನೈ – ಬೆಂಗಳೂರು ನಡುವಣ ಅಂತರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.

Advertisement

ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ .ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement