ಟಿಡಿಪಿಯೊಂದಿಗೆ ಮೈತ್ರಿ ಘೋಷಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್

ಅಮರಾವತಿ: ಆಂಧ್ರಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಪವನ್ ಕಲ್ಯಾಣ್ ಘೋಷಿಸಿದ್ದಾರೆ.

ಬಹುಕೋಟಿ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದ ನಂತರ ಅವರು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದ ಹೊರಗೆ ಈ ಘೋಷಣೆ ಮಾಡಲಾಗಿದೆ.

ಇನ್ನು ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ, ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಮೈತ್ರಿ ಮಾತುಕತೆಯಲ್ಲಿ ಭಾಗಿಯಾಗಿ ಪವನ್ ಕಲ್ಯಾಣ್ ಜತೆಗಿದ್ದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement