ಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡ

ಹಿಮಾಚಲ: ಟ್ರಾಫಿಕ್ ಜಾಮ್ ನಿಂದ ಬೇಸತ್ತು ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಚಾಲಕನಿಗೆ ಪೊಲೀಸರು ದಂಡ ವಿಧಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ. ಇದರಿಂದ ಪಾರಾಗಲು ಚಾಲಕ ತನ್ನ ಮಹಿಂದ್ರಾ ಥಾರ್ ಅನ್ನು ಹಿಮಾಚಲ ಪ್ರದೇಶದಲ್ಲಿನ ಚಂದ್ರ ನದಿಯಲ್ಲಿ ಓಡಿಸಿದ್ದಾನೆ.

ಈ ರೀತಿ ನದಿಯಲ್ಲಿ ಕಾರು ಚಾಲನೆ ಮಾಡುವುದು ಅಪಾಯಕಾರಿಯಾಗಿದ್ದು, ನದಿಯಲ್ಲಿನ ಜಲಚರಗಳಿಗೆ ಹಾನಿಯಾಗುತ್ತದೆ. ಆದ್ದರಿಂದ ಪೊಲೀಸರು ಚಾಲಕನ ವಿರುದ್ದ ಕ್ರಮಕೈಗೊಂಡು ದಂಡ ವಿಧಿಸಿದ್ದಾರೆ. ಹಾಗೂ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಿದ್ದಾರೆ.

Advertisement

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಮಾತ್ರವಲ್ಲದೆ ಕೆಲವರು ಈ ವಿಡಿಯೋವನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರಿಗೂ ಟ್ಯಾಗ್ ಮಾಡುತ್ತಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement