ಡಿಕೆಶಿ ಅಕ್ರಮ ಆಸ್ತಿ ಪ್ರಕರಣ: ನ.10 ಸುಪ್ರೀಂನಲ್ಲಿ ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆ

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಈ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.

ಸಿಬಿಐ ಪರ ವಾದ ಮಂಡಿಸಿದ ಎಎಸ್‌ಜಿ ಎಸ್‌ವಿ ರಾಜು ಅವರು ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಹಿಂದೆ ಸಿಬಿಐ ಡಿಕೆಶಿ ಅವರ ವಿಚಾರಣೆ ಮಾಡದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.
ಇನ್ನು

ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಈ ಕುರಿತಾಗಿ ಉತ್ತರಿಸಲು ಕೊಂಚ ಕಾಲಾವಕಾಶ ಕೋರಿದರು.ಇನ್ನು ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಲಿದೆ. ಇನ್ನು ಈ ಪ್ರಕರಣದ ಕುರಿತು ಜೂನ್‌ ತಿಂಗಳಿನಲ್ಲಿ ಕರ್ನಾಟಕ ಹೈಕೋರ್ಟ್ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಬಳಿಕ ಇದೀಗ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇದೀಗ ವಿಚಾರಣೆಗೆ ಗ್ರೀನ್ ಸಿಗ್ನಲ್‌ ನೀಡಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement