ಡ್ರೋನ್ ಪ್ರತಾಪ್ ಆತ್ಮಹತ್ಯೆ ಯತ್ನ ವದಂತಿ – ಸ್ಪಷ್ಟನೆ ನೀಡಿದ ಕಲರ್ಸ್ ಕನ್ನಡ PRO ಮನೋಜ್..!

ಸದ್ಯ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಕಾರ್ಯಕ್ರಮದ ಸ್ಪರ್ಧಿ ಡ್ರೋನ್ ಪ್ರತಾಪ್‌ ಆತ್ಮಹತ್ಯೆಗೆ ಯತ್ನಿಸಿರುವ ವದಂತಿಗಳ ನಡುವೆ ಕಲರ್ಸ್ ಕನ್ನಡದ PRO ಮನೋಜ್ ಸ್ಪಷ್ಟನೆ ನೀಡಿದ್ದಾರೆ‌.

ಕಳೆದೆರಡು ದಿನಗಳ ಹಿಂದೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜ್ಯೋತಿಷಿ ವಿದ್ಯಾಶಂಕರ್ ಅವರು ಡ್ರೋನ್ ಪ್ರತಾಪ್ ಅವರಿಗೆ ಮನೆಯವರ ಜೊತೆಯಿಂದ ದೂರವಿರುವಂತೆ ಕಿವಿ ಮಾತು ಹೇಳಿದ್ದರು.

ಇದರಿಂದ ಮಾನಸಿಕ ಖಿನ್ನತೆಗೆ ಜಾರಿದ ಡ್ರೋನ್ ಪ್ರತಾಪ್ ಎರಡು ದಿನಗಳಿಂದ ಊಟ-ಉಪಹಾರ ಸೇವಿಸಿರಲಿಲ್ಲ‌. ಹಾಗಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸದ್ಯ ಅವರು ಚೇತರಿಸಿಕೊಂಡಿದ್ದು, ಇಂದು ಮತ್ತೆ ಬಿಗ್ ಬಾಸ್ ಮನೆಗೆ ಮರಳಲಿದ್ದಾರೆ ಎಂದು ಕಲರ್ಸ್ ಕನ್ನಡ PRO ಮನೋಜ್ ಸ್ಪಷ್ಟನೆ ನೀಡಿದ್ದಾರೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರತಾಪ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಕೆಲವು ಮಂದಿ ಪ್ರತಾಪ್ ಅವರು ವಿಟಮಿನ್ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೂಡ ಹೇಳುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಮ್ಮ ಮಗನಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಡ್ರೋನ್ ಪ್ರತಾಪ್ ತಂದೆ ಕೂಡ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ‘ಡ್ರೋನ್’ ಮೂಲಕ ರಾಜ್ಯದಲ್ಲಿ ಭಾರಿ ಸುದ್ದಿಯಾದ ಡ್ರೋನ್ ಪ್ರತಾಪ್ ಸದ್ಯ ಬಿಗ್ ಬಾಸ್ ಸ್ಪರ್ಧಿಯಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಬಹಳ ಮುಗ್ದನಂತೆ ಆಟವಾಡುತ್ತಿರುವ ಡ್ರೋನ್ ಪ್ರತಾಪ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದು ಉತ್ತಮ ಆಟ ಪ್ರದರ್ಶಿಸುತ್ತಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement