ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಆಂಧ್ರ ಸರ್ಕಾರ

ಅಮರಾವತಿ:ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.

ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement