ತುರ್ತು ಸಂದರ್ಭದಲ್ಲಿ ಸಾರ್ವಜನಿಕರನ್ನು ಎಚ್ಚರಿಸಲು ಮೊಬೈಲ್ ಗೆ ಸಂದೇಶ ರವಾನೆ – ಪ್ರಾಯೋಗಿಕ ಕಾರ್ಯಾಚರಣೆ ಆರಂಭ

ದೂರಸಂಪರ್ಕ ಇಲಾಖೆ ಗ್ರಾಹಕರನ್ನು ಎಚ್ಚರಿಸುವ ಇನ್ನೊಂದು ರಾಷ್ಟ್ರೀಯ ಸಂದೇಶವನ್ನು ಅಳವಡಿಸಲು ಮುಂದಾಗಿದೆ. ಈ ಬಾರಿ ಸಾರ್ವಜನಿಕರ ಸುರಕ್ಷತೆ ಮತ್ತು ತುರ್ತು ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಶುಕ್ರವಾರ ಈ ಕುರಿತು ಎಮರ್ಜೆನ್ಸಿ ಅಲರ್ಟ್ ಪರೀಕ್ಷೆ ನಡೆಸಲಾಯಿತು.

ಸಂದೇಶ ರವಾನೆ

ಎಮರ್ಜೆನ್ಸಿ ಅಲರ್ಟ್ ಸಂದೇಶವನ್ನು ವೋಡಾಫೋನ್ ಐಡಿಯಾ, ಜಿಯೋ, ಏರ್ ಟೆಲ್ ಮತ್ತು ಬಿಸೆನ್ನೆಲ್ ಗ್ರಾಹಕರಿಗೆ ಕಳುಹಿಸಲಾಗಿದೆ. ಈ ಸಂದೇಶವನ್ನು ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಗ್ರಾಹಕರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಷನಲ್ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಅಥಾರಿಟಿ (NDMA ) ಸೂಚನೆ ಮೇರೆಗೆ ಈ ತುರ್ತು ಪರಿಸ್ಥಿತಿ ಎಚ್ಚರಿಕೆಯ ಸಂದೇಶವನ್ನು ಗ್ರಾಹಕರಿಗೆ ಕಳುಹಿಸಲಾಗಿದೆ.

Advertisement

ಈ ಸಂದೇಶ ಬಂದರೆ ನೀವು ಯಾವುದೇ ಕ್ರಮ ಕೈಗೊಳ್ಳಬೇಕಾಗಿಲ್ಲ. ಪ್ರಾಯೋಗಿಕವಾಗಿ ಇದನ್ನು ಕಳುಹಿಸಲಾಗಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ತುರ್ತು ಪರಿಸ್ಥಿತಿಯಲ್ಲಿ ಎಚ್ಚರಿಕೆ ಮೂಡಿಸುವುದು ಈ ಕಾರ್ಯಾಚರಣೆಯ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮೊಬೈಲ್ ಗೆ ಈ ಸಂದೇಶ ರವಾನೆಯಾಗಿದೆ. ಸಂದೇಶ ಸ್ವೀಕರಿಸಿದಾಗ ಫೋನ್ ವೈಬ್ರೇಶನ್ ಆಗುವ ಜೊತೆಗೆ ಎಚ್ಚರಿಸುವ ರೀತಿಯ ಶಬ್ದ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement