ದಳಪತಿಗಳಿಗೆ ಮತ್ತೊಂದು ಶಾಕ್!: ಜೆಡಿಎಸ್ ಶಾಸಕರು‌ ಕೈ ಸಂಪರ್ಕದಲ್ಲಿ..? ಈ ಬಗ್ಗೆ ಡಿಕೆಶಿ ನೀಡಿದ ಪ್ರತಿಕ್ರಿಯೆ ಏನು?

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ಜೆಡಿಎಸ್‌ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ. ಹೀಗಾಗಿ ಜೆಡಿಎಸ್‌ ಪಕ್ಷದ 12 ಜನ ಶಾಸಕರು ಕಾಂಗ್ರೆಸ್‌ ಸೇರುತ್ತಾರೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಮಾತನಾಡಿದ ಅವರು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಸುಮ್ಮನೆ ಊಹಾಪೋಹಾ ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಎಂತಹವರಾದರೂ ಈ ವಿಚಾರದಲ್ಲಿ ಹತಾಶರಾಗಿರುತ್ತಾರೆ. ಅವರ ಪಕ್ಷದಲ್ಲಿ ಹಾಗೂ ಕುಟುಂಬದಲ್ಲಿನ ಆಂತರಿಕ ಸಮಸ್ಯೆಗಳು ಎಲ್ಲರಿಗೂ ಗೊತ್ತಿದೆ. ಈಗ ನಾನು ಆ ಬಗ್ಗೆ ಚರ್ಚೆ ಮಾಡುವುದಿಲ್ಲ.

ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಮಾಡುವ ಸಮಯದಿಂದಲೂ ಅವರ ಕುಟುಂಬದವರ ಹೇಳಿಕೆಗಳನ್ನು ಗಮನಿಸಿಕೊಂಡು ಬನ್ನಿ. ಅವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದರು.

Advertisement

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement