ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ ಇನ್ನಿಲ್ಲ.!

 

ಬೆಳಗಾವಿ:  ಗೋಕಾಕ  ಅರಭಾವಿಮಠ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ(75) ಭಾನುವಾರ ಲಿಂಗೈಕ್ಯರಾದರು.

ರಾತ್ರಿ ಪೂಜೆಗೆ ಸಿದ್ಧತೆ ನಡೆಸಿದ ವೇಳೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾಗಿ ವೈದ್ಯರು ತಿಳಿಸಿದರು ಎಂದು ಮಠದ ಮೂಲಗಳು ತಿಳಿಸಿವೆ.

Advertisement

ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ ಜನಿಸಿದ ಶ್ರೀಗಳು, 1977ರಲ್ಲಿ ಈ ಮಠದ ಪೀಠ ಅಲಂಕರಿಸಿದ್ದರು. ಅವರ ಪೂರ್ವಾಶ್ರಮದ ತಂದೆಯ ಹೆಸರು ಶಿವಯ್ಯ, ತಾಯಿಯ ಹೆಸರು ಶಿವಮ್ಮ. ಈ ಮಠದ 11ನೇ ಪೀಠಾಧಿಪತಿ ಇವರಾಗಿದ್ದರು ಎಂದು ಮಠದ ಭಕ್ತರು ತಿಳಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement