ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ಶಾಕ್ – ಬಿಡುಗಡೆ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ : ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆ ನಡೆಯುವವರೆಗೆ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಆದೇಶವನ್ನು ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ಕೆಲವೇ ಗಂಟೆಗಳ ಮೊದಲು ಈ ಪ್ರಕರಣದಲ್ಲಿ ಕೇಜ್ರಿವಾಲ್ ಜಾಮೀನನ್ನು ಜಾರಿ ನಿರ್ದೇಶನಾಲಯ ಇಂದು ಪ್ರಶ್ನಿಸಿದೆ. ನಿನ್ನೆ, ದೆಹಲಿ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಲು ಆದೇಶಿಸಿತು. ಆದರೆ, ಪರಿಹಾರ ನೀಡುವ ಮೊದಲು ಕೆಲವು ಷರತ್ತುಗಳನ್ನು ವಿಧಿಸಿತು, ಇದರಲ್ಲಿ ಅವರು ತನಿಖೆಗೆ ಅಡ್ಡಿಪಡಿಸಲು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ಎಂದು ಸೂಚನೆ ನೀಡಿ ಜಾಮೀನು ನೀಡಿತ್ತು. ಆದರೆ, ಇಂದು ದೆಹಲಿ ಹೈಕೋರ್ಟ್ ಬಿಡುಗಡೆ ಆದೇಶಕ್ಕೆ ತಡೆ ನೀಡಿದೆ. ಇದರಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸಂಕಷ್ಟ ಎದುರಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement