ಧರ್ಮಸ್ಥಳ ಪ್ರಕರಣ: ‘ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರಕಾರದ ಉದ್ದೇಶ’- ಡಿ.ಕೆ.ಶಿ

WhatsApp
Telegram
Facebook
Twitter
LinkedIn

ಬೆಂಗಳೂರು :ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿ, ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ ಎಂದರು.

ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು ಎಂದು ತಿಳಿಸಿದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon