ನಾಡಹಬ್ಬ ದಸರಾಗೆ ಅರಣ್ಯ ಇಲಾಖೆಯಿಂದ ಸಿದ್ಧತೆ ಆರಂಭ

ಮೈಸೂರು : ಮೈಸೂರು ದಸರಾ ಮಹೋತ್ಸವದ ಗಜಪಯಣ ಆಗಸ್ಟ್ 21ರಂದು ನಡೆಯಲಿದೆ. ಹೀಗಾಗಿ ಅರಣ್ಯ ಇಲಾಖೆಯು ಸಿದ್ಧತೆ ಆರಂಭಿಸಿದೆ.

ಈ ಬಾರಿಯ ದಸರಾಗೆ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದೆ. ಈ ಗಜಪಡೆಯು 2 ತಿಂಗಳ ಮುಂಚಿತವಾಗಿಯೇ ಮೈಸೂರಿಗೆ ಆಗಮಿಸಲಿದೆ. ಮೈಸೂರಿಗೆ ಗಜಪಯಣ ದಿನಾಂಕ ನಿಗದಿಯಾದ ಹಿನ್ನೆಲೆ 4 ಹೆಚ್ಚುವರಿ ಆನೆಗಳನ್ನು ಸಹ ಇಲಾಖೆ ಗುರುತಿಸಿದೆ.

ಈ ಬಾರಿಯೂ ಅಂಬಾರಿಯನ್ನು ಕ್ಯಾಪ್ಟನ್ ಅಭಿಮನ್ಯುವೇ ಹೊರಲಿದ್ದಾನೆ. ಇನ್ನು 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

Advertisement

ಇನ್ನು ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು, ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ. ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement