ನಾನು ಕೇಂದ್ರ ಸಚಿವರಾಗುವ ವದಂತಿ ಯಾವ ಕಾರಣಕ್ಕೆ ಹುಟ್ಟಿಕೊಂಡಿತು ಎನ್ನುವುದೇ ಯಕ್ಷಪ್ರಶ್ನೆ – ಹೆಚ್‌ಡಿ

ಹೊಸದಿಲ್ಲಿ: ತಾವು ಕೇಂದ್ರ ಸಚಿವರಾಗುವ ವದಂತಿಗಳ ಬಗ್ಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾನು ಮಂತ್ರಿಯಾಗುತ್ತೇನೆ ಎನ್ನುವ ಸುದ್ದಿ ಅದು ಎಲ್ಲಿಂದ ಹುಟ್ಟಿತು, ಯಾವ ಮೂಲಗಳಿಂದ ಅಷ್ಟು ಪ್ರಾಮುಖ್ಯತೆ ಪಡೆಯಿತೋ ಎನ್ನುವುದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮೂಲಕವೇ ನನಗೆ ಆ ವಿಷಯ ಗೊತ್ತಾಯಿತು ಎಂದು ಹೇಳಿದರು.

ಚುನಾವಣೆಗೆ ಇನ್ನು ಎರಡು ತಿಂಗಳಷ್ಟೇ ಸಮಯ ಉಳಿದಿದೆ. ಈಗ ನಾನು ಮಂತ್ರಿಯಾಗಿ ಮಾಡುವುದು ಏನಿದೆ? ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ನಾನು ಏನು ಕೆಲಸ ಮಾಡಲು ಸಾಧ್ಯ? ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ, ಅದರಿಂದ ಉಪಯೋಗವೂ ಇಲ್ಲ ಎಂದರು.

Advertisement

ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ನನ್ನಲ್ಲಿ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ಅದಷ್ಟೇ ನನ್ನ ಮುಂದಿರುವ ಏಕೈಕ ಅಜೆಂಡಾ ಎಂದು ಅವರು ಅವರು ಹೇಳಿದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement