ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ – ತಿಂಗಳ ಬಳಿಕ ರೇಬಿಸ್‍ಗೆ ಬಲಿ

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್‍ ಮೃತ ಬಾಲಕ.

ಶಹವಾಜ್‍ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಬುಲಂದ್‍ಶಹರ್‍ನಿಂದ ಗಾಜಿಯಾಬಾದ್‍ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ.

Advertisement

ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್‍ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement