ನಾಳೆ  ವಿಜಯನಗರಕ್ಕೆ ಮುಖ್ಯಮಂತ್ರಿಗಳ ಭೇಟಿ.!

 

ಹೊಸಪೇಟೆ : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನವಂಬರ್ 2ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಮಾಡುವರು.

ಅಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ ಸ್ಟ್ರಿಪ್ (ಎಂ.ಎಸ್.ಪಿ.ಎಲ್) ನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಳಿಗ್ಗೆ 11.15 ಕ್ಕೆ ಹೊಸಪೇಟೆಗೆ ಆಗಮಿಸಿ, ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು. ಸಂಜೆ 5 ಗಂಟೆಗೆ ಹಂಪಿಯ ಶ್ರೀ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ, 5.30 ಕ್ಕೆ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥದ ದೀಪ ಪ್ರಜ್ವಾಲನೆ, 5.50 ಕ್ಕೆ ಕನ್ನಡಾಂಬೆಗೆ ನುಡಿ ನಮನ, ಧರ್ಮಗಳ ಸಂದೇಶ ಹಾಗೂ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥ ಯಾತ್ರೆಗೆ ಚಾಲನೆ ನೀಡುವರು. ಬಳಿಕ ಕಮಲಾಪುರದ ಎವಾಲ್ವ್ ಬ್ಯಾಕ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವರು.

Advertisement

ನ.3ರ ಬೆಳಿಗ್ಗೆ 9ಗಂಟೆಗೆ ಮುಖ್ಯ ಮಂತ್ರಿಗಳು ಕೊಪ್ಪಳಕ್ಕೆ ಪ್ರಯಾಣ ಬೆಳಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement