‘ನಿಜವಾಗಿಯೂ ಪಾಕ್ ಭಾರತದ ಸ್ನೇಹ ಬಯಸಿದರೆ ಉಗ್ರ ಕೃತ್ಯ ನಿಲ್ಲಿಸಬೇಕು’- ಫಾರೂಕ್ ಅಬ್ದುಲ್ಲಾ

ಶ್ರೀನಗರ : ನಿಜವಾಗಿಯೂ ಪಾಕಿಸ್ತಾನವು ಭಾರತದ ಸ್ನೇಹ ಬಯಸಿದರೆ ಈ ಉಗ್ರ ಕೃತ್ಯಗಳನ್ನು ನಿಲ್ಲಿಸಬೇಕು. ಜಮ್ಮು ಹಾಗೂ ಕಾಶ್ಮೀರವನ್ನು ಪಾಕಿಸ್ತಾನವಾಗಲು ನಾವು ಎಂದೂ ಬಿಡುವುದಿಲ್ಲ ಎಂದು ಜೆಕೆಎನ್‌ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಅ.20ರಂದು ಭಯೋತ್ಪಾದಕರು ದಾಳಿ ನಡೆದಿದ್ದು, ಈ ದಾಳಿಯಲ್ಲಿ ವೈದ್ಯರು ಮತ್ತು 6 ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು, ‘ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿಯನ್ನು ಕದಡಲು ಪದೇ ಪದೇ ಪ್ರಯತ್ನಿಸುತ್ತಿದೆ. ನಮ್ಮ ಸೈನಿಕರು ಪಾಕಿಸ್ತಾನದ ಪ್ರತಿಯೊಂದು ಪಿತೂರಿ ಮತ್ತು ಪ್ರತಿ ಭಯೋತ್ಪಾದಕ ಘಟನೆಯನ್ನು ವಿಫಲಗೊಳಿಸುತ್ತಾರೆ. ಅಪರಾಧ ಮಾಡಿದವರಿಗೆ ಅವರ ಅಪರಾಧಗಳಿಗೆ ಶೀಘ್ರದಲ್ಲೇ ಶಿಕ್ಷೆಯಾಗುತ್ತದೆ. ಈ ದಾಳಿ ನಡೆದ ರೀತಿ ಆತಂಕಕಾರಿಯಾಗಿದೆ ಎಂದಿದ್ದಾರೆ.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement