ನೇಹಾ ಕೊಲೆ ವೈಯಕ್ತಿಕ, ಇಂತಹ ಘಟನೆಗಳು ಆಕಸ್ಮಿಕ – ಸಿಎಂ, ಗೃಹ ಸಚಿವರ ಹೇಳಿಕೆಗೆ ಆಕ್ರೋಶ

ಬೆಂಗಳೂರು : ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ.

ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ ಎಂದು ಹೇಳಿದ್ದಾರೆ. ಇನ್ನು, ಇತ್ತ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು.

Advertisement

ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ತಿಳಿಸಿದ್ದಾರೆ. ಇನ್ನು, ಗೃಹ ಸಚಿವರ ಈ ಹೇಳಿಕೆಗೆ ಸ್ವತಃ ನೇಹಾ ತಂದೆ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮಗಳು ಆತನನ್ನು ಪ್ರೀತಿ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಜನ ಕೂಡಾ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳಿಗೆ ಕೆಂಡ ಕಾರುತ್ತಿದ್ದಾರೆ.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement